ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಹೆಚ್ಚಳ: ಸಿಎಂ

ಶುಕ್ರವಾರ, 29 ಸೆಪ್ಟಂಬರ್ 2017 (20:49 IST)
ದಸರಾ ಹಬ್ಬದ ಅಂಗವಾಗಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರಕಾರಿ ನೌಕಕರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.
ಸರಕಾರಿ ನೌಕರರಿಗೆ ಶೇ.4.25 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ದಸರಾ ಹಬ್ಬವನ್ನು ಮತ್ತಷ್ಟು ಸಂಭ್ರಮದಿಂದ ಆಚರಿಸುವಂತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಕೇಂದ್ರ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿರುವ ಬೆನ್ನಲ್ಲೆ ತಾವೇನು ಕಮ್ಮಿ ಎನ್ನುವಂತೆ ಸಿಎಂ ಸಿದ್ದರಾಮಯ್ಯ ಕೂಡಾ ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದು ನೌಕರ ವರ್ಗದವರಿಗೆ ಸಂತಸ ತಂದಿದೆ.
 
ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಜುಲೈ 1 ರಿಂದಲೇ ಅನ್ವಯವಾಗಲಿದೆ ಎಂದು ವಿತ್ತ ಸಚಿವಾಲಯದ ಮೂಲಗಳು ತಿಳಿಸಿವೆ.
 
ರಾಜ್ಯದಲ್ಲಿರುವ ಸುಮಾರು 6 ಲಕ್ಷ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಅನ್ವಯವಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಸರಕಾರಿ ನೌಕರರು ಸಂತಸ ವ್ಯಕ್ತಪಡಿಸಿದ್ದಾರೆ.

\ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ