ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಮಾತನಾಡಿದ ಸಿಐಟಿಯು ಕಾರ್ಯದರ್ಶಿ ಸುಬ್ಬಾರಾವ್, ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ರೈಲ್ವೆ ಹಾಗೂ ರಕ್ಷಣಾ ವಲಯದಲ್ಲಿ ವಿದೇಶಿ ಬಂಡಾವಾಳ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡಿದೆ. ಅಲ್ಲದೆ ರೈಲ್ವೆಯನ್ನು ಖಾಸಗೀಕರಣಗೊಳಿಸಲು ನಿರ್ಧಿಸಿದೆ. ಸರ್ಕಾರದ ಈ ಕ್ರಮ ಸರಿಯಲ್ಲ ಎಂದ ಅವರು, ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಕಾರ್ಮಿಕರಿಗೆ 15 ಸಾವಿರ ಕನಿಷ್ಟ ವೇತನ ನೀಡುವಂತೆ ಕೋರಲಾಗಿತ್ತು. ಆದರೆ ಸರ್ಕಾರ 7 ಸಾವಿರ ನಿಗದಿಗೊಳಿಸಲು ನಿರ್ಧರಿಸಿದೆ. ಸರ್ಕಾರದ ವರ್ತನೆ ಹೀಗೆಯೇ ಮುಂದುವರಿದಲ್ಲಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.