ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76 ನೇ ಅಧಿವೇಶನದಲ್ಲಿ ಸೋಮವಾರ ಮೊದಲ ಸಮಿತಿಯ ಸಾಮಾನ್ಯ ಚರ್ಚೆಯಲ್ಲಿ ಉತ್ತರಿಸುವ ಹಕ್ಕಿನಡಿ ವಿಶ್ವಸಂಸ್ಥೆಯ ಭಾರತದ ಖಾಯಂ ಕಾರ್ಯಾಚರಣೆಯ ಸಲಹೆಗಾರ ಎ. ಅಮರನಾಥ್, ಪಾಕಿಸ್ತಾನದ ಖಾಯಂ ಪ್ರತಿನಿಧಿ ಇಲ್ಲಿ ಶಾಂತಿ, ಭದ್ರತೆ ಬಗ್ಗೆ ಮಾತನಾಡುತ್ತಾರೆ. ಅಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಒಸಾಮಾ ಬಿನ್ ಲಾಡೆನ್ ನಂತಹ ಜಾಗತಿಕ ಭಯೋತ್ಪಾದಕರನ್ನು ಹುತಾತ್ಮರೆಂದು ವೈಭವೀಕರಿಸಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ನಿಶ್ಯಸ್ತ್ರೀಕರಣ, ಜಾಗತಿಕ ಸವಾಲುಗಳ ಅಂತರಾಷ್ಟ್ರೀಯ ಸಮುದಾಯದ ಮೇಲೆ ಪರಿಣಾಮ ಮೊದಲ ಸಮಿತಿಯು ಬೀರುತ್ತದೆ. ಅಲ್ಲದೇ, ಅಂತರರಾಷ್ಟ್ರೀಯ ಭದ್ರತಾ ಆಡಳಿತದಲ್ಲಿನ ಸವಾಲುಗಳಿಗೆ ಪರಿಹಾರಗಳನ್ನು ಹುಡುಕುತ್ತದೆ.