ರಾಜ್ಯದಲ್ಲಿ ಇಂದಿರಾಗಾಂಧಿ ಕಾಂಗ್ರೆಸ್ ಹೋಗಿ, ಸಿದ್ದರಾಮಯ್ಯ ಕಾಂಗ್ರೆಸ್ ಆಗಿದೆ– ಎಚ್.ಆರ್.ಶ್ರೀನಾಥ

ಶನಿವಾರ, 23 ಡಿಸೆಂಬರ್ 2017 (15:31 IST)
ರಾಜ್ಯದಲ್ಲಿ ಇಂದಿರಾಗಾಂಧಿ ಕಾಂಗ್ರೆಸ್ ಹೋಗಿ ಸಿದ್ದರಾಮಯ್ಯ ಕಾಂಗ್ರೆಸ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಟ್ಲರ್ ಇದ್ದಂತೆ ಎಂದು ಕಾಂಗ್ರೆಸ್ ಮುಖಂಡ ಎಚ್.ಆರ್.ಶ್ರೀನಾಥ ಆರೋಪಿಸಿದ್ದಾರೆ.
 
ಇಂದಿರಾಗಾಂಧಿ ಕಾಲದಿಂದಲೂ ನಾವು ಕಾಂಗ್ರೆಸ್ಸಿಗರು. ಆದರೆ, ಸಿದ್ದರಾಮಯ್ಯ ಅವರು ಮೂಲ ಕಾಂಗ್ರೆಸ್‌ನವರ ಮೇಲೆ ದರ್ಪ ಪ್ರದರ್ಶಿಸಿ ಮೂಲೆ ಗುಂಪು ಮಾಡುತ್ತಿದ್ದಾರೆ. ಇದರಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
 
ಸಾಧನಾ ಸಮಾವೇಶದಲ್ಲಿ ಇಕ್ಬಾಲ್ ಅನ್ಸಾರಿಗಂಗಾವತಿ ಕ್ಷೇತ್ರದ ಅಭ್ಯರ್ಥಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಇದರಿಂದ ಕೊಪ್ಪಳದಲ್ಲಿ ಭಿನ್ನಮತ ಸ್ಪೋಟಿಸಿದ್ದು, ಶ್ರೀನಾಥ್ ಹಾಗೂ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ