ಅಕ್ಕನ ಸಾವಿನ ಬಗ್ಗೆ ಸಹೋದರ ಇಂದ್ರಜಿತ್ ಲಂಕೇಶ್ ಹೇಳಿದ್ದೇನು?

ಬುಧವಾರ, 6 ಸೆಪ್ಟಂಬರ್ 2017 (11:21 IST)
ಬೆಂಗಳೂರು: ಪ್ರಗತಿಪರ ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಗ್ಗೆ ಸಹೋದರ ಹಾಗೂ ಚಿತ್ರ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

 
ಅಕ್ಕನ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಎಂದು ಆಗ್ರಹಿಸಿರುವ ಅವರು ಎಲ್ಲಾ ಮಾಹಿತಿ ಇದ್ದವರೇ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಹಲವು ಬಾರಿ ಅಕ್ಕನಿಗೆ ಪೊಲೀಸ್ ರಕ್ಷಣೆ ಕೊಡಿ ಎಂದು ಕೇಳಿದ್ದರೂ, ಕಿವಿಗೊಡಲಿಲ್ಲ ಎಂದು ದೂರಿರುವ ಅವರು, ಓರ್ವ ಮಹಿಳೆ, ವಿಚಾರವಾದಿ, ಹೋರಾಟಗಾರ್ತಿಯನ್ನು ಕೊಲ್ಲಲಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಗೌರಿ ಲಂಕೇಶ್ ಮೃತದೇಹವನ್ನು ಸಂಸ ಬಯಲು ರಂಗಮಂದಿರದಲ್ಲಿ 3 ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಂತರ ಚಾಮರಾಜಪೇಟೆಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ.. ಗೌರಿ ಲಂಕೇಶ್ ಹತ್ಯೆ: ಬೆಂಗಳೂರಿಗೆ ಬಂದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ