ಅನಂತ ಅಗಲಿಕೆ: ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕರಿಂದ ಸಂತಾಪ

ಸೋಮವಾರ, 12 ನವೆಂಬರ್ 2018 (19:40 IST)
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಎನ್.ಅನಂತಕುಮಾರ ಅವರು ನಿಧನ ಹೊಂದಿರುವ ವಿಷಯ ತಿಳಿದು ಅತೀವ ದುಃಖವಾಯಿತು ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಅನಂತಕುಮಾರ ಅವರ ನಿಧನದಿಂದಾಗಿ ರಾಷ್ಟ್ರ ಒಬ್ಬ ಸರಳ ಹಾಗೂ ಸಜ್ಜನಿಕೆಯ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಬೆಂಗಳೂರು ದಕ್ಷಿಣದಿಂದ ಸತತವಾಗಿ ಲೋಕಸಭೆಗೆ ಆಯ್ಕೆಯಾಗುತ್ತಿದ್ದ ಜನಾನುರಾಗಿ ನಾಯಕರಾಗಿದ್ದ ದಿವಂಗತ ಅನಂತಕುಮಾರ ಅವರು ಆರು ಬಾರಿ ಸಂಸದರಾಗಿ ಕೇಂದ್ರದ ಅನೇಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಅವರ ನಿಧನದಿಂದಾಗಿ ಅವರ ಕುಟುಂಬ ವರ್ಗದವರಿಗೆ ಆದ ನಷ್ಟವನ್ನು ಭರಿಸುವ ಶಕ್ತಿಯನ್ನು ಭಗವಂತನು ದಯಪಾಲಿಸಲಿ ಎಂದು ಪ್ರಾರ್ಥಿಸುವೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಶೋಕ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ