ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ

ಗುರುವಾರ, 30 ಜನವರಿ 2020 (04:28 IST)
ಮುಂಬೈ : ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅವರು ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಮಂಗಳವಾರ ಮುಂಬೈನಲ್ಲಿ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಈ ಪ್ರಶಸ್ತಿಯನ್ನು  ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅವರು ನೀಡಿದ್ದಾರೆ. ಆ ವೇಳೆ ಪ್ರಶಸ್ತಿ ಸ್ವೀಕರಿಸಲು ರತನ್ ಟಾಟಾ ಅವರು ವೇದಿಕೆ ಮೇಲೆ ಬಂದಾಗ ಎನ್.ಆರ್.ನಾರಾಯಣ ಮೂರ್ತಿ ಅವರು , ಅವರ ಕಾಲನ್ನು ಮುಟ್ಟಿ ಆಶೀರ್ವಾದ ಪಡೆದಿದ್ದಾರೆ.

ಇದಕ್ಕೆ ಸಂಬಂಧಪಟ್ಟ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,  ನಾರಾಯಣ ಮೂರ್ತಿಯವರ ಸಂಸ್ಕಾರಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ