ಈ ಹಿನ್ನೆಲೆಯಲ್ಲಿ ಮಂಜುನಾಥ್, ಐವರು ಪೊಲೀಸರ ವಿರುದ್ಧ ದೂರು ದಾಖಲಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆರೋಪಿ ಸ್ಥಾನದಲ್ಲಿದ್ದ ಪೊಲೀಸರು ಸೂಕ್ತ ಸಾಕ್ಷಿಗಳೊಂದಿಗೆ ಮಂಜುನಾಥ್ ಅವರನ್ನು ಗೂಂಡಾ ಎಂದು ಸಾಬೀತು ಪಡಿಸುವಲ್ಲಿ ವಿಫಲವಾದರು. ಈ ಹಿನ್ನೆಲೆ ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ.