ಮುಖ್ಯ ಆಯುಕ್ತರಿಂದ ಯಲಹಂಕ ವಲಯ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳ ಪರಿಶೀಲನೆ

ಮಂಗಳವಾರ, 28 ಜೂನ್ 2022 (20:32 IST)
ನಗರದ ಯಲಹಂಕ ವಲಯದ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಇಂದು ವಿವಿಧ ಸ್ಥಳಗಳಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಕ್ಕೂರು ಕ್ರಾಸ್‌ನಿಂದ ಸಾಗರ್ ಹೋಟೆಲ್ ಮತ್ತು ಕೃಷ್ಣ ಸಾಗರ್ ಹೋಟೆಲ್‌ನಿಂದ ಕೆಂಪೇಗೌಡ ವೃತ್ತದವರೆಗೆ ರಸ್ತೆ ಅಭಿವೃದ್ದಿಯನ್ನು ಕೈಗೊಂಡಿದ್ದು, ಚರಂಡಿ, ಪಾದಚಾರಿ ಮಾರ್ಗವನ್ನು ನವೀಕರಿಸಿ 3 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ. ಎಂ.ಇ.ಹೆಚ್.ಸಿ.ಎಸ್ ಬಡಾವಣೆಯಲ್ಲಿರುವ ಉದ್ಯಾನವನ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಬೇಕು. ಜೊತೆಗೆ ಎಂ.ಐ.ಹೆಚ್.ಸಿ.ಎಸ್ ಬಡಾವಣೆಯಿಂದ ಕೆಂಪೇಗೌಡ ವೃತ್ತದ ಅರ್ಕಾವತಿ ಬಿಡಿಎ ಬಡಾವಣೆಯಲ್ಲಿರುವ ರಸ್ತೆ ರಸ್ತೆಗಳಿದ್ದು, ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ, ಕೂಡಲೆ ಟೆಂಡರ್ ಪ್ರಕ್ರಿಯೆ ಆರಂಭಿಸಿ, ಕಾರ್ಯರೂಪಕ್ಕೆ ಅಧಿಕಾರಿಗಳು ಸೂಚಿಸಿದ್ದಾರೆ. 
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 08 ವಲಯಗಳ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೀಡಲು ಮುಖ್ಯ ಆಯುಕ್ತರ ಕಛೇರಿಗೆ ಆಗಮಿಸುತ್ತಿದ್ದರು ಇದನ್ನ ಮನಗಂಡ ಆಯುಕ್ತರು ಸಾರ್ವಜನಿಕರಿಗೆ ಅನುಕೂಲ ಆಗಬೇಕೆನ್ನುವ ನಿಟ್ಟಿನಲ್ಲಿ ಹಾಗೂ ವಲಯ ಮಟ್ಟದಲ್ಲಿ ನಡೆಯುತ್ತಿರುವ ಕಾರ್ಯಚಟುವಟಿಕೆಗಳನ್ನು ನಿಯಮಿತವಾಗಿ ಪರಿಶೀಲಿಸುವ ಸಲುವಾಗಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಇಂದು ಯಲಹಂಕ ವಲಯ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ