ವೈದ್ಯರೇ ಸೂಚಿಸಿದರೂ ಆಸ್ಪತ್ರೆಯಿಂದ ಬಿಡುಗಡೆಯಾಗದ ವಿದ್ವತ್!

ಶನಿವಾರ, 3 ಮಾರ್ಚ್ 2018 (10:55 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ನಿಂದ ಹಲ್ಲೆಗೊಳಗಾಗಿ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ವತ್ ಚೇತರಿಸಿಕೊಂಡರೂ ಡಿಸ್ಚಾರ್ಜ್ ಆಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ವಿದ್ವತ್ ಗೆ ಚಿಕಿತ್ಸೆ ನೀಡುತ್ತಿದ್ದ ಡಾ. ಆನಂದ್ ಖಾಸಗಿ ವಾಹಿನಿಗಳಿಗೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿದ್ವತ್ ಶೇ. 80 ರಷ್ಟು ಗುಣಮುಖರಾಗಿದ್ದಾರೆ. ಅವರು ಡಿಸ್ಚಾರ್ಜ್ ಆಗಬಹುದು ಎಂದು ಈಗಾಗಲೇ ವರದಿ ಕೊಟ್ಟಿರುವುದಾಗಿ ಹೇಳಿದ್ದಾರೆ.

ಹಾಗಿದ್ದರೂ ವಿದ್ವತ್ ಬಿಡುಗಡೆಯಾಗಿಲ್ಲ ಮತ್ತು ತನಿಖಾಧಿಕಾರಿಗಳಿಗೆ ಇನ್ನೂ ಹೇಳಿಕೆ ನೀಡಿಲ್ಲ. ಇದೆಲ್ಲಾ ಪ್ರಕರಣದ ತೀವ್ರತೆ ಕಡಿಮೆಯಾಗದೇ ಇರಲು ಮಾಡುತ್ತಿರುವ ತಂತ್ರವಾ ಎಂಬ ಅನುಮಾನ ಮೂಡಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ