ಅಂತರಾಜ್ಯ ಕಳ್ಳರ ಬಂಧನ: ಪಿಸ್ತೂಲ್, ಜೀವಂತ ಗುಂಡುಗಳು ವಶಕ್ಕೆ

ಶುಕ್ರವಾರ, 17 ಆಗಸ್ಟ್ 2018 (20:54 IST)
ಅಂತರಾಜ್ಯ ಕಳ್ಳರನ್ನು ಬಂಧಿಸಿರುವ ತೊಗರಿ ಖಣಜದ ಪೊಲೀಸರು ಬಂಧಿತರಿಂದ ಪಿಸ್ತೂಲ್, ಗುಂಡುಗಳು ಹಾಗೂ ಕಳ್ಳತನಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಬುರಗಿ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 550 ಗ್ರಾಂ ಚಿನ್ನಾಭರಣ, 1 ಕೆಜಿ ಬೆಳ್ಳಿ, 1 ಪಿಸ್ತೂಲ್ ಹಾಗೂ 9 ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಅಂತರಾಜ್ಯ ಕಳ್ಳರಿಂದ ಮನೆ ಒಡೆಯಲು ಬಳಸುವ ರಾಡ್, ಮಾಸ್ಕ್, ಗ್ಲೌಸ್ ಹಾಗೂ ಖಾರದ ಪುಡಿಯನ್ನು ಜಪ್ತಿಮಾಡಿಕೊಂಡಿದ್ದಾರೆ.

ಸೋಲಾಪುರದ ಶಿವಾಜಿ ಗಾಯಕವಾಡ, ಶ್ರೀಕಾಂತ, ಶಂಕರ, ಕಲಬುರಗಿಯ ನಾಗರಾಜ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ತಿಳಿಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ