ರೈತರನ್ನ ಹೇಡಿ ಎಂದ ಬಿಸಿ ಪಾಟೀಲ್ ವಿರುದ್ಧ ಈರಣ ಕಡಾಡಿ ಅಸಮಾಧಾನ

ಶುಕ್ರವಾರ, 4 ಡಿಸೆಂಬರ್ 2020 (10:58 IST)
ಬೆಂಗಳೂರು : ಕೃಷಿ ಸಚಿವ ಬಿ.ಸಿ.ಪಾಟೀಲ್ ‘ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು’ ಎಂಬ ಹೇಳಿಕೆಗೆ ಈರಣ ಕಡಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಸಿ.ಪಾಟೀಲ್ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ರೈತರು ಸ್ವಾಭಿಮಾನಿಗಳು, ಹೇಡಿಗಳಲ್ಲ. ಮಾತಿನ ಬರದಲ್ಲಿ ಕೃಷಿ ಸಚಿವರು ಹೇಳಿರಬಹುದು. ಹಾಗಾಗಿ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಲೇಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೇ ಈ ಹೇಳಿಕೆಯ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಬಿ.ಸಿ.ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ