ದಲಿತರ ಮನೆಯಲ್ಲಿ ಊಟ ಮಾಡುವುದು ದೊಡ್ಡ ವಿಚಾರವೇ: ಬಿಜೆಪಿ ನಾಯಕರಿಗೆ ಖರ್ಗೆ ಪ್ರಶ್ನೆ

ಭಾನುವಾರ, 21 ಮೇ 2017 (14:49 IST)
ದಲಿತರ ಮನೆಯಲ್ಲಿ ಊಟ ಮಾಡುವುದು ದೊಡ್ಡ ವಿಚಾರವೇ ಎಂದು ಬಿಜೆಪಿ ನಾಯಕರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಪ್ರಶ್ನಿಸಿದ್ದಾರೆ.
 
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಜೊತೆ ದಲಿತರಿಲ್ಲ ಎನ್ನುವುದನ್ನು ಈ ಮೂಲಕ ಸ್ಪಷ್ಟಪಡಿಸಿದ್ದೀರಿ. ಬಿಜೆಪಿ ಪ್ರಚಾರ ಪಡೆಯಲು ದಲಿತರಿಗೆ ಅಪಮಾನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಐಎಎಸ್ ಅದಿಕಾರಿ ಅನುರಾಗ್ ತಿವಾರಿ ಸಾವಿನ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಅನುರಾಗ್ ತಿವಾರಿ ಉತ್ತರಪ್ರದೇಶದಲ್ಲಿ ಮೃತಪಟ್ಟಿದ್ದಾರೆ. ಉತ್ತರಪ್ರದೇಶದಲ್ಲಿ ಬಿಜೆಪಿ ಸರಕಾರವಿದೆ. ಯಾವುದೇ ತನಿಖೆ ನಡೆಸಲಿ. ರಾಜ್ಯ ಸರಕಾರ ಸಂಪೂರ್ಣ ಸಹಕಾರ ನೀಡಲು ಸಿದ್ದವಿದೆ ಎಂದರು.
 
ಬಿಜೆಪಿಯವರು ಹಿರಿಯ ಐಎಎಸ್ ಅಧಿಕಾರಿ ಸಾವಿನ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಅವರು ನಮ್ಮ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದಾರೆ ಎನ್ನುವುದು ಮರೆಯುವುದು ಬೇಡ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಕಿವಿಮಾತು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ