ಬಿಜೆಪಿ ನಾಯಕರು ನಟಿ ಸುಮಲತಾರನ್ನು ಭೇಟಿ ಮಾಡಿದ್ದು ನಿಜನಾ? ಈ ಬಗ್ಗೆ ಸುಮಲತಾ ಹೇಳಿದ್ದೇನು?

ಮಂಗಳವಾರ, 5 ಮಾರ್ಚ್ 2019 (07:30 IST)
ಬೆಂಗಳೂರು : ಬಿಜೆಪಿಯವರು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ನಟಿ ಸುಮಲತಾ ಅಂಬರೀಷ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.


ಮಂಡ್ಯ ಲೋಕಸಭಾ ಕ್ಷೇತ್ರ ಬಹುತೇಕ ಜೆಡಿಎಸ್ ಗೆ ಪಕ್ಕಾ ಆಗಿರುವ ಹಿನ್ನೆಲೆ ಸುಮಲತಾ ಅವರಿಗೆ ಟಿಕೆಟ್ ಸಿಗಲ್ಲ, ಹೀಗಾಗಿ ಅವರು ಬಿಜೆಪಿ ಸೇರಲಿದ್ದು ಈ ಹಿನ್ನಲೆಯಲ್ಲಿ ಅಮಿತ್ ಶಾ ಹಾಗೂ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಸುಮಲತಾ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು.


ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ನಟಿ ಸುಮಲತಾ ಅಂಬರೀಷ್ ಅವರು,’ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ತಮ್ಮ ಜೊತೆ ಮಾತನಾಡಿಲ್ಲ, ಬಿಜೆಪಿಯ ಯಾಬೊಬ್ಬ ಮುಖಂಡ ಕೂಡ ತಮ್ಮನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ