ಸರಕಾರ ಉಳಿಯುತ್ತಾ? ಉರುಳುತ್ತಾ? - ವಿಶ್ವಾಸಮತ ಯಾಚನೆಗೆ ಮುಹೂರ್ತ ಫಿಕ್ಸ್

ಸೋಮವಾರ, 15 ಜುಲೈ 2019 (16:35 IST)
ವಿಧಾನಸಭಾ ಕಲಾಪ ಸಲಹಾ ಸಮಿತಿಯು ಮೈತ್ರಿ ಸರಕಾರದ ಮುಖ್ಯಮಂತ್ರಿಯು ಜುಲೈ 18ರಂದು ವಿಶ್ವಾಸಮತ ಯಾಚನೆಯ ನಿರ್ಣಯ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.

ಜುಲೈ 18 ರಂದು ವಿಶ್ವಾಸ ಮತ ಯಾಚನೆಯನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಡಲಿದ್ದಾರೆ.

ವಿಧಾನಸಭೆ ಅಧಿವೇಶನ ಆರಂಭದ ದಿನವೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತಮಗೆ ವಿಶ್ವಾಸ ಮತ ಯಾಚನೆಗೆ ಸಮಯ ಫಿಕ್ಸ್ ಮಾಡೋವಂತೆ ಸ್ಪೀಕರ್ ಗೆ ಮನವಿ ಮಾಡಿದ್ರು.

ಸ್ಪೀಕರ್ ಇವತ್ತು ಕಲಾಪ ಸಲಹಾ ಸಮಿತಿ ಸಭೆ ನಡೆಸಿ ಜುಲೈ 18 ರಂದು ಬೆಳಗ್ಗೆ 11 ಕ್ಕೆ ಚರ್ಚೆ ನಡೆಸೋಕೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ, ಡಾ.ಜಿ.ಪರಮೇಶ್ವರ್, ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ