ವಿಜಯೇಂದ್ರ ಪರಿಷತ್ ಸ್ಥಾನಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂಬ ಸುದ್ದಿ ನಿಜನಾ?

ಮಂಗಳವಾರ, 29 ಮೇ 2018 (07:35 IST)
ಬೆಂಗಳೂರು : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಜಿಲ್ಲೆ ವರುಣ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಕಾರಣ ವಿಧಾನಪರಿಷತ್ ಚುನಾವಣೆಯಲ್ಲಿ ಪುತ್ರ ವಿಜಯೇಂದ್ರನನ್ನು ಕಣಕ್ಕೆ ಇಳಿಸಲು ಬಿಎಸ್ ಯಡಿಯೂರಪ್ಪನವರು ಚಿಂತನೆ ನಡೆಸಿದ್ದಾರೆ ಎಂಬ ಸುದ್ದಿ ಕೇಳಿ ಬಂದಿರುವ ಹಿನ್ನಲೆಯಲ್ಲಿ ಇದೀಗ ಬಿಎಸ್‍ವೈ ಅವರ ಪುತ್ರ ವಿಜಯೇಂದ್ರ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.


ಈ ಬಗ್ಗೆ ಟ್ವಿಟ್ ಮಾಡಿರುವ ವಿಜಯೇಂದ್ರ ಅವರು ,’ನಾನು ಪರಿಷತ್ ಸ್ಥಾನಕ್ಕೆ ಪ್ರಯತ್ನಿಸುತ್ತಿದ್ದೇನೆ ಎಂಬ ಅಪ್ಪಟ ಸುಳ್ಳು ಸುದ್ದಿ ಹರದಾಡುತ್ತಿದೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಪಕ್ಷದಲ್ಲಿ ಅರ್ಹರಾಗಿರುವವರು ಅನೇಕ ಮಂದಿ ಹಿರಿಯರಿದ್ದಾರೆ. ಪಕ್ಷದಲ್ಲಿ ಸುಮ್ಮನೆ ಗೊಂದಲ ಮೂಡಿಸುವ ಪ್ರಯತ್ನ ಇದಾಗಿದೆ’  ಎಂದು ತಿಳಿಸುವುದರ ಮೂಲಕ ಈ ಸುದ್ದಿಗೆ ತೆರೆಎಳೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ