ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಐಸಿಸ್ ಕಾರಣ: ಆರ್.ಅಶೋಕ್

ಶನಿವಾರ, 9 ಡಿಸೆಂಬರ್ 2017 (15:03 IST)
ರಾಜ್ಯದಲ್ಲಿ ಬಿಜೆಪಿ ನಾಯಕರ ಹತ್ಯೆಗೆ ಜಾಗತಿಕ ಉಗ್ರಗಾಮಿ ಸಂಘಟನೆಯಾದ ಐಸಿಸ್ ಕಾರಣ. ಹತ್ಯೆಯಲ್ಲಿ ಐಸಿಸ್ ಕೈವಾಡವಿದೆ ಎಂದು ಎನ್‌ಐಎ ಹೇಳಿಗೆ ಎಂದು ಮಾಜಿ ಡಿಸಿಎಂ, ಬಿಜೆಪಿ ಮುಖಂಡ ಆರ್‌.ಅಶೋಕ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಜಾಗತಿಕ ಉಗ್ರಗಾಮಿ ಸಂಘಟನೆಯಾದ ಐಸಿಸ್ ಕಾರಣ ಅದಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರ ಕುಮ್ಮಕ್ಕಿದೆ ಎಂದು ಆರೋಪಿಸಿದ್ದಾರೆ.
 
ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಬಗ್ಗೆ ಮೃದು ಧೋರಣೆ ಹೊಂದಿದೆ. ಉಗ್ರರನ್ನು ಪರೋಕ್ಷವಾಗಿ ಬೆಂಬಲಿಸುವುದು ಕಾಂಗ್ರೆಸ್ ಪಕ್ಷದ ಕಾಯಕವಾಗಿದೆ ಎಂದು ಕಿಡಿಕಾರಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಅಭಿವೃದ್ಧಿಯ ವಿರೋಧಿಯಾಗಿದ್ದಾರೆ. ಬೆಂಗಳೂರು ನಗರ ಪಾಟ್‌ಹೋಲ್‌ಗಳ ನಗರವಾಗಿದೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ