ಸಚಿವರ ಮನೆಗಳ ಮೇಲೆ ಐಟಿ ದಾಳಿ ನಡೆಸಲು ಸಂಚು: ಡಿ.ಕೆ.ಶಿವಕುಮಾರ್

ಶುಕ್ರವಾರ, 17 ಮಾರ್ಚ್ 2017 (18:29 IST)
ರಾಜ್ಯದಲ್ಲಿ ಸಚಿವರ ಮನೆಗಳ ಮೇಲೆ ಐಟಿ ದಾಳಿ ನಡೆಸಲು ಸಿದ್ದತೆ ನಡೆಸಲಾಗುತ್ತಿದೆ. ಸಚಿವರ ನಿವಾಸಗಳ ಫೋನ್ ಕಟ್ ಮಾಡಲಾಗುತ್ತಿದೆ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
 
ಕಾಂಗ್ರೆಸ್ ಮುಖಂಡರ ನಿವಾಸಗಳ ಮೇಲೆ ಐಟಿ ದಾಳಿ ನಡೆಯುವ ಬಗ್ಗೆ ಮಾಹಿತಿ ದೊರೆತಿದೆ. ಕೇಂದ್ರ ಸರಕಾರ ವಿಪಕ್ಷಗಳ ಮುಖಂಡರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ ಎಂದು ಆರೋಪಿಸಿದರು.
 
ಕೇಂದ್ರದ ಒತ್ತಡದಿಂದ ಐಟಿ ಅಧಿಕಾರಿಗಳು ಇಕ್ಕಟ್ಟಿನಲ್ಲಿದ್ದಾರೆ. ಬೇಕಾದಷ್ಟು ಜನ ಐಟಿ ದಾಳಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಪಾಪ ಐಟಿಯವ್ರು ತುಂಬಾ ಪ್ರಯತ್ನ ಪಡುತ್ತಿದ್ದಾರೆ. ಆದರೆ, ಇಂತಹ ಕೀಳು ರಾಜಕೀಯಕ್ಕೆ ನಾವು ಮಣಿಯುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕೇವಲ ಕಾಂಗ್ರೆಸ್ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎನ್ನುವದು ಕಾಂಗ್ರೆಸ್ ಮುಖಂಡರ ಆರೋಪವಾಗಿದೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ