ಸೋತಿರೋದಕ್ಕೆ ಕುಂಟು ನೆಪ ಹೇಳೋದು ಸರಿಯಲ್ಲ : ತೇಜಸ್ವಿ ಸೂರ್ಯ

ಸೋಮವಾರ, 15 ಮೇ 2023 (12:52 IST)
ಬೆಂಗಳೂರು : ಬೇರೆ ಬೇರೆ ಕಡೆ ಗೆದ್ದಾಗ, ಚುನಾವಣಾ ಆಯೋಗ ಸರಿಯಿದೆ. ಸೋತಾಗ ಸರಿಯಿಲ್ಲ ಅಂತಾರೆ. ಆದರೆ ಸೋತಿರೋದಕ್ಕೆ ಕುಂಟು ನೆಪ ಹೇಳೋದು ಸರಿಯಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದರು.
 
ಭಾರೀ ಹೈಡ್ರಾಮಾದ ಬಳಿಕ ಜಯನಗರ ಗೊಂದಲಕ್ಕೆ ತೆರೆ ಬಿದ್ದಿದೆ. ಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಗೆಲುವು ತನ್ನದಾಗಿಸಿಕೊಂಡಿದ್ದಾರೆ. ಆದರೆ ಬಿಜೆಪಿಯವರು ಮೋಸ ಮಾಡಿ ಗೆದ್ದಿದ್ದಾರೆ. ಇದಕ್ಕೆ ಸಂಸದ ತೇಜಸ್ವಿ ಸೂರ್ಯನೇ ನೇರ ಕಾರಣ ಎಂಬ ರಾಮಲಿಂಗರೆಡ್ಡಿ ಆರೋಪ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ತೇಜಸ್ವಿ ಸೂರ್ಯ ತಿರುಗೇಟು ನೀಡಿದರು.

ಒಂದೇ ಸಲ ಮರು ಮತ ಎಣಿಕೆಯಾಗಿದೆ. ನಮ್ಮ ಅಭ್ಯರ್ಥಿ ಕರೆ ಮಾಡಿದ ಮೇಲೆ ಅಲ್ಲಿಗೆ ಹೋಗಿದ್ದೆವು. ನಾವು ಹೋಗುವುದಕ್ಕಿಂತ ಮುಂಚೆ ರಾಮಲಿಂಗಾರೆಡ್ಡಿ ಅವ್ರು ಹೋಗಿದ್ದರು. ಕಾಂಗ್ರೆಸ್ ಅಭ್ಯರ್ಥಿ ಗೆಲುವು ಅಂತ ಚುನಾವಣಾ ಅಧಿಕಾರಿಗಳು ಘೋಷಣೆಯೇ ಮಾಡಿರಲಿಲ್ಲ. ಆಗ್ಲೇ ಗೆದ್ರು ಅಂತ ಅವರು ಸಂಭ್ರಮ ಮಾಡಿದ್ದರು ಎಂದು ವಾಗ್ದಾಳಿ ನಡೆಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ