ಅಧಿಕಾರ ಅನುಭವಿಸಿ ರಾಜೀನಾಮೆ ನೀಡಿದ್ದು ಸರಿಯಲ್ಲ-ಮಲ್ಲಿಕಾರ್ಜುನ ಖರ್ಗೆ

ಶನಿವಾರ, 27 ಆಗಸ್ಟ್ 2022 (18:21 IST)
ಗುಲಾಂ ನಬಿ ಅಜಾದ್ ಕಾಂಗ್ರೆಸ್​ ಪ್ರಾತಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ವಿಚಾರ ಕುರಿತು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ನಲವತ್ತು ವರ್ಷಗಳ ಕಾಲ ಅಧಿಕಾರ ಅನುಭವಿಸಿ ರಾಜೀನಾಮೆ ನೀಡಿದ್ದು ಸರಿಯಲ್ಲ . ಪಕ್ಷವ ಅವರಿಗೆ ಎಲ್ಲವನ್ನೂ ಕೊಟ್ಟಿದೆ. ಪಕ್ಷ ಸಂಕಷ್ಟ ಸಮಯದಲ್ಲಿರುವಾಗ ಅಜಾದ್ ನಡೆ ಸರಿಯಲ್ಲ. ಇಡೀ ದೇಶಾದ್ಯಂತ ಭಾರತ್ ಜೋಡೋ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಹಿರಿಯ ನಾಯಕರು ರಾಜೀನಾಮೆ ಕೊಡುವುದು ಸರಿಯಲ್ಲ.ಇದು ಬಿಜೆಪಿ, ಆರ್ಎಸ್ಎಸ್ ವಿರುದ್ಧದ ಹೋರಾಟ. ಈ ಸಮಯದಲ್ಲಿ ಗುಲಾಂ ನಬಿ ಅಜಾದ್ ರಾಜೀನಾಮೆ ನೋಡಿದ್ರೆ ಬಿಜೆಪಿ, RSSಗೆ ಹೆದರಿ ರಾಜೀನಾಮೆ ಕೊಟ್ಟಿದ್ದಾರೆ ಎನಿಸುತ್ತೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ