ಉದ್ಯಾಮಿ ಪ್ರದೀಪ್ ನನ್ನ ಭೇಟಿ ಮಾಡಿದ್ದು ನಿಜ-ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಸೋಮವಾರ, 2 ಜನವರಿ 2023 (20:40 IST)
ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಡೆತ್‌ ನೋಟ್‌ ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಸರು ಸೇರಿದಂತೆ ಆರು ಜನರ ವಿರುದ್ಧ ಎಫ್‌ ಐಆರ್‌ ದಾಖಲಾದ ಬೆನ್ನಲ್ಲೆ ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ ನಡೆಸಿದ್ದಾರೆ.. ಪ್ರದೀಪ್‌ನ ಆತ್ಮಕ್ಕೆ ಶಾಂತಿ ಸಿಗಲಿ ಆಥ್ಮಹತ್ಯೆಗೆ ಶರಣಾದ ಪ್ರದೀಪ್‌ ನಮ್ಮ ಕಾರ್ಯಕರ್ತನೇ ಆಗಿದ್ದಾನೆ.ಜೂನ್‌ ಜುಲೈನಲ್ಲಿ ನಮ್ಮ ಪಕ್ಷದ ಕಚೇರಿಗೆ ಬಂದಿದ್ದನು . ಪ್ರದೀಪ್ ನನ್ನನ್ನು ಭೇಟಿಯಾಗಿದ್ದು ನಿಜ. ನನಗೆ ಸಮಸ್ಯೆಯಾಗಿದೆ ಎಂದು ನನ್ನ ಬಳಿ ಹೇಳಿಕೊಂಡಿದ್ದನು. ಆತ ನೀಡಿದ ಸಂಖ್ಯೆಗೆ ಹಣ ನೀಡುವಂತೆ ಹೇಳಿದ್ದೆನೆ. ಪರಸ್ಪರ ಕೂತು ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸಿಕೊಳ್ಳುವಂತೆ ಹೇಳಿದ್ದೆ. ಉದ್ಯಮಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಾಗ ಬರೆದಿಟ್ಟ ಡೆತ್‌ ನೋಟ್‌ನಲ್ಲಿ ನನ್ನ ಹೆಸರು ಉಲ್ಲೇಖಿಸಿದ್ದಾರೆ. ಪ್ರಕರಣದ ತನಿಖೆಗೆ ಸಂಪೂರ್ಣ ಸಹಾಯ ನೀಡುತ್ತೇನೆ. ಇನ್ಮುಂದೆ ಇಂತಹ ವಿಚಾರದಲ್ಲಿ ಸಹಾಯ ಮಾಡೋದಕ್ಕೆ ಹೋಗುವ ಮುನ್ನಾ ಜನಪ್ರತಿನಿಧಿಗಳೆ ಹುಷಾರಾಗಿರಿ ಎಂದು ಎಚ್ಚರಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ