ಐಟಿ ದಾಳಿ: ಮೋದಿ ಹೇಳಿಕೆ ರಾಜಕೀಯ ಪ್ರೇರಿತ ಎಂದ ಸಚಿವ ರಮೇಶ್ ಜಾರಕಿಹೊಳಿ

ಶನಿವಾರ, 28 ಜನವರಿ 2017 (16:01 IST)
ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ನಡೆದ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಬೇಜಾವಾಬ್ದಾರಿಯಾಗಿ ಮಾತನಾಡಿದ್ದಾರೆ. ಮೋದಿ ಹೇಳಿಕೆ ರಾಜಕೀಯ ಪ್ರೇರಿತ ಎಂದು ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಹೇಳಿಕೆ ನೀಡುವ ಮೊದಲು ಪರಿಶೀಲನೆ ನಡೆಸಿ ಮಾತನಾಡಬೇಕಿತ್ತು. ಅತಂತ್ರ ಯುಪಿ ಚುನಾವಣೆ ಸಮೀಕ್ಷೆಯಿಂದ ಬಿಜೆಪಿಯವರು ಗಾಬರಿಗೊಂಡಿದ್ದಾರೆ. ಕಾಂಗ್ರೆಸ್ ಸಮಾವೇಶದಿಂದ ಭಯಭೀತಗೊಂಡಿದ್ದಾರೆ ಎಂದು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
 
ಐಟಿ ದಾಳಿ ವೇಳೆ ನಮ್ಮ ನಿವಾಸದಲ್ಲಿ ಅಕ್ರಮ ಆಸ್ತಿ ಸಿಕ್ಕಿಲ್ಲ. ಐಟಿ, ಇಡಿ ಇಲಾಖೆಗಳು ಗೌರವಯುತ ಸಂಸ್ಥೆಗಳಾಗಿದ್ದು, ಇವು ನಂಬಿಕೆ ಕಳೆದುಕೊಳ್ಳುವ ಕೆಲಸ ಮಾಡಬಾರದು ಎಂದು ಸಲಹೆ ನೀಡಿದರು.
 
ಜಾರಕಿಹೊಳಿ ಸಹೋದರರು ರಾಜಕೀಯವಾಗಿ ಬೇರೆ ಬೇರೆಯಾದರೂ, ಕುಟುಂಬ ವಿಷಯದಲ್ಲಿ ನಾವೆಲ್ಲ ಒಂದೇ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ