ಐಟಿ ದಾಳಿಗೆ ತಿರುಗೇಟು: ಬಿಎಸ್‌ವೈ-ಕರಂದ್ಲಾಜೆಗೆ ಬಂತು ಸಂಕಷ್ಟ?

ಗುರುವಾರ, 3 ಆಗಸ್ಟ್ 2017 (18:57 IST)
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮೇಲಿನ ಐಟಿ ದಾಳಿಗೆ ಪ್ರತಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್‌ ವಿರುದ್ದದ ಪ್ರಕರಣಗಳಿಗೆ ಮರುಜೀವ ನೀಡಲು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
 ಡಿಕೆಶಿ ಮೇಲಿನ ಐಟಿ ದಾಳಿಗೆ ತಿರುಗೇಟು ನೀಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದು, ಅವರ ವಿರುದ್ಧದ ಪ್ರಕರಣಗಳಿಗೆ ಮರುಜೀವ ನೀಡಲು ತೀರ್ಮಾನಿಸಲಾಗಿದೆ. ಬಿಜೆಪಿಯ 16 ನಾಯಕರ ವಿರುದ್ಧ ದೂರು ದಾಖಲಾಗಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
 
ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಸೇರಿದಂತೆ ಕೆಲ ಪ್ರಮುಖ ನಾಯಕರ ವಿರುದ್ಧ ಎಸಿಬಿ ಅಧಿಕಾರಿಗಳು ಕ್ರಮಕೈಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
 
ಕೇಂದ್ರ ಸಚಿವ ಅನಂತ್‌ಕುಮಾರ್ ವಿರುದ್ಧ ಕೂಡಾ ದೂರು ದಾಖಲಾಗಿದ್ದು, ಅವರ ವಿರುದ್ಧ ಕೂಡಾ ಎಸಿಬಿ ಛೂ ಬಿಡುವ ಸಾಧ್ಯತೆಗಳಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ