ಹುಬ್ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಎಸ್. ಉಗ್ರಪ್ಪ, ಪ್ರತಿಪಕ್ಷ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ಅರ್ಹರಲ್ಲ, ಜಗದೀಶ್ ಶೆಟ್ಟರ್ ಮತ್ತು ಕೆ.ಎಸ್.ಈಶ್ವರಪ್ಪ ಸುಳ್ಳಿನ ಸರದಾರರು ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ರೈತರ ಕುರಿತು ಬಿಜೆಪಿ ನಾಯಕರಿಗೆ ಕಿಂಚಿತ್ತು ಕಾಳಜಿಯಿಲ್ಲ. ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಜಾರಿ ಕುರಿತು ನಿರ್ಲಕ್ಷ ತೊರುತ್ತಿದ್ದಾರೆ. ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಮಧ್ಯ ಹೊಂದಾಣಿಕೆ ಇಲ್ಲ. ಇವರಿಬ್ಬರು ಉತ್ತರ, ದಕ್ಷಿಣ ದಿಕ್ಕಿನಂತಿದ್ದಾರೆ ಎಂದು ಆರೋಪಿಸಿದ್ದಾರೆ.