ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ, ಸಾಮಾಜದ ಸ್ವಾಸ್ಥ್ಯ ಕೆಡಿಸುವ, ಕಪೋಲ ಕಲ್ಪಿತ ಮಾಹಿತಿಗಳ ಮೂಲಕ ಜನರ ಭಾವನೆ ಕೆರಳಿಸಿ ಶಾಂತಿ ಕದಡುವ ಸಂದೇಶಗಳನ್ನು ಹರಡುವವರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಸೃಷ್ಟಿಸುವವರಿಗೆ ಮತ್ತು ಹಬ್ಬಿಸುವವರ ವಿರುದ್ಧ 7ವರ್ಷ ಜೈಲಿಹಾಗೂ 10 ಲಕ್ಷ ದಂಡ ವಿಧಿಸಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ, ಸಾಮಾಜದ ಸ್ವಾಸ್ಥ್ಯ ಕೆಡಿಸುವ, ಕಪೋಲ ಕಲ್ಪಿತ ಮಾಹಿತಿಗಳ ಮೂಲಕ ಜನರ ಭಾವನೆ ಕೆರಳಿಸಿ ಶಾಂತಿ ಕದಡುವ ಸಂದೇಶಗಳನ್ನು ಹರಡುವವರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.
ಇದಕ್ಕಾಗಿಯೇ 'ಕರ್ನಾಟಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ (ನಿಷೇಧ) ಮಸೂದೆ' ಶೀಘ್ರವೇ ಜಾರಿಗೆ ಬರಲಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಸೃಷ್ಟಿಸುವವರಿಗೆ ಮತ್ತು ಹಬ್ಬಿಸುವವರಿಗೆ 7 ವರ್ಷ ಜೈಲು, ರೂ. 10 ಲಕ್ಷದ ವರೆಗೂ ದಂಡ ವಿಧಿಸುವ ಕಾನೂನು ಜಾರಿಯಾಗಲಿದೆ.