ಜೆಡಿಎಸ್ ಸಮಾವೇಶಕ್ಕೆ ಜಮೀರ್ ಅಹ್ಮದ್ ಗೈರು

ಶನಿವಾರ, 24 ಜನವರಿ 2015 (11:53 IST)
ನಗರದ ಅರಮನೆ ಮೈದಾನದಲ್ಲಿ ಜೆಡಿಎಸ್‌ನ ಬೃಹತ್ ಸಮಾವೇಶ ನಡೆಯುತ್ತಿದ್ದು, ಪಕ್ಷದ ಶಾಸಕ ಜಮೀರ್ ಅಹ್ಮದ್ ನಾನು ಯಾವುದೇ ಕಾರಣಕ್ಕೂ ಅರಮನೆ ಕಡೆ ತಲೆ ಹಾಕುವ ಜಾಯಮಾನವೇ ನಂದಲ್ಲ ಎಂದು ಖಡಕ್ಕಾಗಿ ಪ್ರತಿಕ್ರಿಯಿಸಿದ್ದಾರೆ. 
 
ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ವರಿಷ್ಠ ದೇವೇಗೌಡರಿಂದಾಗಲಿ, ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರಿಂದಾಗಲಿ ಅಥವಾ ಪಕ್ಷದ ಪ್ರಾದೇಶಿಕ ಕಚೇರಿಯಿಂದಾಗಲಿ ಯಾವುದೇ ರಿತಿಯ ಅಧಿಕೃತ ಆಹ್ವಾನ ಬಂದಿಲ್ಲ. ಈ ಹಿನ್ನೆಲೆಯಲ್ಲಿ ನಾನು ನಡೆಯುತ್ತಿರುವ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ. ಅತ್ತ ಕಡೆ ತಲೆ ಹಾಕುವ ಜಾಯಮಾನವೇ ನಂದಲ್ಲ ಎನ್ನುವ ಮೂಲಕ ಖಡಕ್ಕಾಗಿ ಪ್ರತಿಕ್ರಿಯಿಸಿದ್ದಾರೆ. 
 
ಸಮಾವೇಶ ಹಿನ್ನೆಲೆಯಲ್ಲಿ ನಿನ್ನೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದ ದೇವೇಗೌಡರು, ಪಕ್ಷದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳಿರುವುದು ಸಾಮಾನ್ಯ. ಆದರೆ ಅವುಗಳನ್ನು ಬಗೆಹರಿಸಿಕೊಳ್ಳುವ ಸಲುವಾಗಿಯೇ ಪಕ್ಷದ ಎಲ್ಲಾ ಮುಖಂಡರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ. ಹಾಗಾಗಿ ಎಲ್ಲರೂ ಪಾಲ್ಗೊಳ್ಳಲಿದ್ದಾರೆ ಎಂದು ಭರವಸೆಯನ್ನು ವ್ಯಕ್ತಪಡಿಸಿದ್ದರು. 

ವೆಬ್ದುನಿಯಾವನ್ನು ಓದಿ