ಕಾಂಗ್ರೆಸ್ ಮುಖಂಡರಿಂದಲೇ ಶಾಸಕ ಜಮೀರ್ ಗೆ ಕ್ಲಾಸ್

ಮಂಗಳವಾರ, 18 ಆಗಸ್ಟ್ 2020 (10:18 IST)
ಪದೇ ಪದೇ ವಿವಾದಿತ ಹೇಳಿಕೆ ನೀಡಿ ಪಕ್ಷದ ಮುಖಂಡರ ಕೆಂಗಣ್ಣಿಗೆ ಗುರಿಯಾಗುತ್ತಿರುವ ಕಾಂಗ್ರೆಸ್ ಶಾಸಕರೊಬ್ಬರಿಗೆ ಪಕ್ಷದ ಮುಖಂಡರು ಮತ್ತೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.


ಬೆಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಇವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡೋದಾಗಿ ಶಾಸಕ ಜಮೀರ್ ಅಹ್ಮದ್ ಘೋಷಣೆ ಮಾಡಿದ್ದು ಅವರಿಗೆ ಮುಳುವಾಗುತ್ತಿರುವಂತಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದ್ದು, ವಯಕ್ತಿಕವಾಗಿ ಬಹಿರಂಗವಾಗದಂತೆ ಪರಿಹಾರ ಕೊಡುವುದಿದ್ದರೆ ಕೊಡಿ. ಆದರೆ ಈ ವಿಷಯ ಬಯಲಿಗೆ ಬರಬಾರದು ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ