ಕುಮಾರಸ್ವಾಮಿ, ದೇವೇಗೌಡರಿಗೆ ಆಹ್ವಾನ ನೀಡದ ಜಮೀರ್

ಬುಧವಾರ, 24 ಸೆಪ್ಟಂಬರ್ 2014 (16:27 IST)
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮತ್ತೊಮ್ಮೆ ಜಮೀರ್ ಅಹ್ಮದ್ ಅಸಮಾಧಾನ ಹೊರಬಿದ್ದಿದೆ. ಬೆಂಗಳೂರಿನ ಚಾಮರಾಜಪೇಟೆಯ ಪಾದರಾಯನಪುರದಲ್ಲಿ ಹಜ್ ಯಾತ್ರಿಗಳಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದ ಕಾರ್ಯಕ್ರಮದ ಬ್ಯಾನರ್‌ಗಳಲ್ಲಿ ಕುಮಾರಸ್ವಾಮಿ, ದೇವೇಗೌಡರ ಭಾವಚಿತ್ರಗಳು ನಾಪತ್ತೆಯಾಗಿವೆ. ಇದರಿಂದ ಜಮೀರ್ ಅಹ್ಮದ್ ಅವರು ಜೆಡಿಎಸ್ ಪಕ್ಷದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಕ್ಕೆ ಸಾಕ್ಷಿಯಾಗಿದೆ.

ಕೆಲವು ಜೆಡಿಎಸ್ ಮುಖಂಡರಿಗೆ ಆಹ್ವಾನ ನೀಡಿದ್ದರೂ ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ಆಹ್ವಾನ ನೀಡದೇ ನಿರ್ಲಕ್ಷಿಸಲಾಗಿದೆ.  ಜಮೀರ್ ತಮ್ಮ ಅಸಮಾಧಾನವನ್ನು ಪರೋಕ್ಷವಾಗಿ ಈ ಮೂಲಕ ಹೊರಹಾಕಿದ್ದಾರೆ. ಕುಮಾರಸ್ವಾಮಿ ತಾವು ಚಿಕಿತ್ಸೆ ಪಡೆಯಲು ಸಿಂಗಾಪುರಕ್ಕೆ ಹೋಗುವುದಾಗಿ ಹೇಳಿದ್ದರು.

ಆದ್ದರಿಂದ ಅವರು ಸಿಂಗಾಪುರಕ್ಕೆ ಹೋಗಿರಬಹುದೆಂದು ಎಣಿಸಿಕೊಂಡು ಆಹ್ವಾನ ನೀಡಿರಲಿಲ್ಲ ಎಂದು ಜಮೀರ್ ಸಮಜಾಯಿಷಿ ನೀಡಿದ್ದಾರೆ. 
 

ವೆಬ್ದುನಿಯಾವನ್ನು ಓದಿ