ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮತ್ತೊಮ್ಮೆ ಜಮೀರ್ ಅಹ್ಮದ್ ಅಸಮಾಧಾನ ಹೊರಬಿದ್ದಿದೆ. ಬೆಂಗಳೂರಿನ ಚಾಮರಾಜಪೇಟೆಯ ಪಾದರಾಯನಪುರದಲ್ಲಿ ಹಜ್ ಯಾತ್ರಿಗಳಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದ ಕಾರ್ಯಕ್ರಮದ ಬ್ಯಾನರ್ಗಳಲ್ಲಿ ಕುಮಾರಸ್ವಾಮಿ, ದೇವೇಗೌಡರ ಭಾವಚಿತ್ರಗಳು ನಾಪತ್ತೆಯಾಗಿವೆ. ಇದರಿಂದ ಜಮೀರ್ ಅಹ್ಮದ್ ಅವರು ಜೆಡಿಎಸ್ ಪಕ್ಷದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಕ್ಕೆ ಸಾಕ್ಷಿಯಾಗಿದೆ.