ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ ಪೂಜಾರಿ

ಗುರುವಾರ, 10 ಮೇ 2018 (14:41 IST)
ಮಂಗಳೂರು : ಕಾಂಗ್ರೆಸ್ ನಾಯಕರ ವಿರುದ್ಧ ಯಾವಾಗಲೂ ಅಸಮಾಧಾನ ವ್ಯಕ್ತಪಡಿಸುವ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಇದೀಗ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ನಗರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಸಿಎಂ ಸಿದ್ದರಾಮಯ್ಯರಿಗೆ ಸಲಹೆಗಳನ್ನು ಕೊಟ್ಟಿದ್ದು ಹೌದು. ದುರಹಂಕಾರಿ ಮನೋಭಾವ ಬದಲಿಸದಿದ್ದರೆ ಸೋಲ್ತಾರೆ ಎಂದಿದ್ದೆ. ಪಕ್ಷಕ್ಕಿಂತ ತಾನೇ ದೊಡ್ಡವನೆಂದು ನಡೆದುಕೊಂಡರೆ ಉಳಿಗಾಲವಿಲ್ಲ. ಈಗಲೂ ಹೇಳ್ತೇನೆ, ದುರಹಂಕಾರ ಬಿಟ್ಟರೆ ಸಿದ್ದರಾಮಯ್ಯ ಉಳೀತಾರೆ. ಇಲ್ಲಾಂದ್ರೆ ಸೋಲುತ್ತಾರೆ, ಸಲಹೆ ಕೊಟ್ಟಿದ್ದು ಕಾಂಗ್ರೆಸ್ ಉಳಿವಿಗೆ. ಆದರೆ, ಸಿದ್ದರಾಮಯ್ಯ ಆಡಳಿತವನ್ನು ಒಳ್ಳೆದಾಗಿ ನಡೆಸಿದ್ದಾರೆ. ಮುಂದೇನು ಸಿದ್ರಾಮಯ್ಯರೇ ಸಿಎಂ ಆಗ್ತಾರೆ’ ಎಂದು ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ