ಅಕ್ರಮ ಗಣಿಗಾರಿಕೆ ಆರೋಪಗಳಿಗೆ ಸಂಬಂಧಿಸಿದಂತೆ ಸುಮಾರು ಮೂರುವರೆ ವರ್ಷಗಳ ಕಾಲ ಜೈಲುವಾಸ ಅನುಭವಿಸಿದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೆ ಕಂಟಕ ಎದುರಾಗಿದ್ದು, ಅವರ ವಿರುದ್ಧ ಹೊಸ ಕೇಸ್ ದಾಖಲಿಸಿ ಎಸ್ಐಟಿ ಬಂಧಿಸಿದೆ. ಎಸ್ಐಟಿ ವಿಚಾರಣೆಗೆ ಜನಾರ್ದನ ರೆಡ್ಡಿ ಹಾಜರಾಗಿದ್ದರು. ಇಂದು ಬೆಳಿಗ್ಗೆಯಿಂದ ಎಸ್ಐಟಿ ಜನಾರ್ದನ ರೆಡ್ಡಿ ವಿರುದ್ಧ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ 11 ಪ್ರಕರಣಗಳ ವಿಚಾರಣೆ ನಡೆಸಿತು.