ಪರಪ್ಪನ ಅಗ್ರಹಾರ ಜೈಲು ಸೇರಿದ ಜನಾರ್ಧನ ರೆಡ್ಡಿ: ಸಿದ್ದರಾಮಯ್ಯ ಪ್ರತಿಕ್ರಿಯೆ ಏನು ಗೊತ್ತಾ?
ನವಂಬರ್ 24 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲು ನ್ಯಾಯಾಲಯ ಆದೇಶ ನೀಡಿದೆ. ಅದರಂತೆ ಮತ್ತೆ ಗಣಿ ದಣಿ ಜೈಲು ಪಾಲಾಗಿದ್ದಾರೆ. ನಾಳೆ ಅವರಿಗೆ ಕೈದಿ ನಂಬರ್ ನೀಡುವ ಸಾಧ್ಯತೆಯಿದೆ.
ಇನ್ನು, ಜನಾರ್ಧನ ರೆಡ್ಡಿ ಬಂಧನದ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ‘ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರ ವಿರುದ್ಧ ಕಾನೂನೇ ಕ್ರಮ ಕೈಗೊಳ್ಳುತ್ತದೆ’ ಎಂದಿದ್ದಾರೆ.