ಬಳ್ಳಾರಿ ಹಿಡಿತಕ್ಕಾಗಿ ಗಡಿ ಭಾಗದಲ್ಲಿ ವಾಸ್ತವ್ಯ ಹೂಡಲಿರುವ ಜನಾರ್ದನ ರೆಡ್ಡಿ

ಶನಿವಾರ, 17 ಫೆಬ್ರವರಿ 2018 (11:14 IST)

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸಿರುವುದರಿಂದ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಬಳ್ಳಾರಿಯ ಗಡಿ ಭಾಗದಲ್ಲಿ ವಾಸ್ತವ್ಯ ಹೂಡಲು ಪ್ರಯತ್ನ ನಡೆಸುತ್ತಿದ್ದಾರೆ.

ಬಳ್ಳಾರಿ ಜಿಲ್ಲೆಗೆ ಪ್ರವೇಶ ಮಾಡದಂತೆ ಸುಪ್ರೀಂಕೋರ್ಟ್ ನಿಷೇದ ಹೇರಿರುವುದರಿಂದ ಅವರು ಬಳ್ಳಾರಿ ಜಿಲ್ಲೆಯ ಗಡಿ ಭಾಗದಲ್ಲಿರುವ ಬೇರೆ ಜಿಲ್ಲೆಗಳ ಸೀಮಾಂತರದಲ್ಲಿ ವಾಸ್ತವ್ಯ ಹೂಡಲು ಚಿಂತನೆ ನಡೆಸಿದ್ದಾರೆ.

ರಾಜ್ಯ ರಾಜಕಾರಣದ ಮೇಲೆ ಹಿಡಿತ ಸಾಧಿಸಲು ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಾಗಿದೆ. ಆದ್ದರಿಂದ ಈ ಪ್ರಯತ್ನ ನಡೆಸಿರುವ ಅವರು ಚಿತ್ರದುರ್ಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ವಾಸ್ತವ್ಯಕ್ಕೆ ಸೂಕ್ತ ಸ್ಥಳವನ್ನು ಶೋಧಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ