ಜಯಲಲಿತಾ ಜಾಮೀನು ಅರ್ಜಿಯ ವಿಚಾರಣೆಯನ್ನು ರಜಾಕಾಲದ ನ್ಯಾಯಪೀಠದ ನ್ಯಾಯಮೂರ್ತಿ ರತ್ನಕಲಾ ಸೋಮವಾರಕ್ಕೆ ಮುಂದೂಡಿರುವುದರಿಂದ ಜಯಲಲಿತಾಗೆ ಸೋಮವಾರದವರೆಗೆ ಜೈಲೇ ಗತಿಯಾಗಿದೆ. ಜಯಲಲಿತಾ ಸಲ್ಲಿಸಿರುವ ಅರ್ಜಿಯ ಸಂಪೂರ್ಣ ವಿಚಾರಣೆ ಅಗತ್ಯವಿದ್ದು, ಇದಕ್ಕೆ ರಜಾ ಕಾಲದ ಪೀಠ ಸೂಕ್ತವಲ್ಲ. ಅರ್ಜಿಯ ಎಲ್ಲಾ ಅಂಶಗಳನ್ನು ಪರಿಗಣಿಸದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಅರ್ಜಿಯ ಸಂಪೂರ್ಣ ವಿಚಾರಣೆ ಅಗತ್ಯವಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.