ಜಯಲಲಿತಾ ಅಭಿಮಾನಿಗಳಿಂದ ದಾಂಧಲೆ: ಶಶಿಕಲಾ ಬೆಂಗಾವಲು ವಾಹನಗಳು ಪುಡಿ ಪುಡಿ

ಬುಧವಾರ, 15 ಫೆಬ್ರವರಿ 2017 (17:54 IST)
ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿಯಾಗಿ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಸೇರಲು ಬಂದಿದ್ದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಬೆಂಗಾವಲು ವಾಹನಗಳ ಗಾಜುಗಳನ್ನು ಪುಡಿ ಪುಡಿ ಮಾಡಿ, ಕಲ್ಲು ತೂರಾಟ ನಡೆಸಿದ್ದರಿಂದ ಉದ್ವಿಗ್ನ ವಾತಾವರಣ ಉಂಟಾಗಿದೆ.
 
ಉದ್ರಿಕ್ತ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ 5 ಸ್ಕಾರ್ಪಿಯೋ 1 ಇನೋವಾ ಕಾರು ಗಾಜು ಪುಡಿ ಪುಡಿಯಾಗಿವೆ ಎಂದು ಮೂಲಗಳು ತಿಳಿಸಿವೆ.
 
ಕೆಲ ಪನ್ನೀರ್ ಸೆಲ್ವಂ ಬೆಂಬಲಿಗರು ಶಶಿಕಲಾ ಬೆಂಗಾವಲು ವಾಹನಗಳಿಗೆ ಚಪ್ಪಲಿ ಏಟು ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
 
30 ವರ್ಷಗಳ ಕಾಲ ಜೊತೆಯಲ್ಲಿದ್ದು ಜಯಲಲಿತಾಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸುತ್ತಿರುವ ಜಯಲಲಿತಾ ಅಭಿಮಾನಿಗಳು, ಶಶಿಕಲಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೇ ಅನೇಕ ವಾಹನಗಳನ್ನು ಜಖಂಗೊಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ