ಜೆಡಿಎಸ್ ಕಾರ್ಯಕರ್ತರ ಮೇಲೆ ಅನುಮಾನ ವ್ಯಕ್ತಪಡಿಸಿದ ಸಚಿವ ಜಿ.ಟಿ. ದೇವೇಗೌಡ

ಬುಧವಾರ, 1 ಮೇ 2019 (18:10 IST)
ಮೈಸೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೆಲವೆಡೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತಹಾಕಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಹೇಳುವುದರ ಮೂಲಕ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ತಪ್ಪಾಗಿದೆ. ಚುನಾವಣೆಯಲ್ಲಿ ಜೊತೆಯಾಗಿ  ಮಾಡಬೇಕಿತ್ತು. ಈ ಬಾರಿ ಕಾಂಗ್ರೆಸ್ ನೊಂದಿಗೆ ಸೇರಿ ಬಿಜೆಪಿಯನ್ನು ಮಣಿಸಲು ನಾವು ಸಾಕಷ್ಟು ಪ್ರಯತ್ನ ಪಟ್ಟಿದ್ದೆವು. ಆದರೆ ಉದ್ದೂರು ಪಂಚಾಯಿತಿ ಸೇರಿ ಕೆಲವೆಡೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತಹಾಕಿದ್ದಾರೆ ಎಂದು ಹೇಳಿದ್ದಾರೆ.


ಅಲ್ಲದೇ ಮೈತ್ರಿ ವಿಚಾರದಲ್ಲಿ ಎರಡು ಕಡೆ ತಪ್ಪಾಗಿದೆ. ಆಯಾ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಿತ್ತು. ತಡವಾಗಿ ಮೈತ್ರಿ ಮಾಡಿಕೊಂಡ ಕಾರಣ ಎಡವಟ್ಟಾಗಿದೆ. ಕಾರ್ಯಕರ್ತರ ನಡುವಿನ ಜಿದ್ದಾಜಿದ್ದಿ ಸರಿಯಾಗಿಲ್ಲ. ಆದರೂ ಕೆಲವು ಕಡೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ