ಪಂಚರತ್ನ ಯಾತ್ರೆಯಲ್ಲಿ ಭಾಗಿಯಾಗಿದ್ದ ಜೆಡಿಎಸ್ ಅಭ್ಯರ್ಥಿ ನಿಧನ

ಶನಿವಾರ, 21 ಜನವರಿ 2023 (10:29 IST)
ವಿಜಯಪುರ : ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ್ ಪಾಟೀಲ್ ಸೋಮಜಾಳ ನಿಧನರಾಗಿದ್ದಾರೆ.

ಹೃದಯಾಘಾತದಿಂದ ಶಿವಾನಂದ್ ಪಾಟೀಲ್ ಸೋಮಜಾಳ (54) ಶುಕ್ರವಾರ ರಾತ್ರಿ ನಿಧನ ಹೊಂದಿದ್ದಾರೆ. ನಾಗಠಾಣ ಮತಕ್ಷೇತ್ರದಲ್ಲಿ ನಡೆದ ಪಕ್ಷದ ಪಂಚರತ್ನ ಕಾರ್ಯಕ್ರಮದಲ್ಲಿ ಹೆಚ್ಡಿಕೆಯೊಂದಿಗೆ ಶಿವಾನಂದ್ ಭಾಗಿಯಾಗಿದ್ದರು. ನಂತರ ಸಂಜೆ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು.

ರಾತ್ರಿ 9 ರ ವೇಳೆ ಅಸ್ವಸ್ಥಗೊಂಡ ಶಿವಾನಂದ್ ಪಾಟೀಲ್ ಸೋಮಜಾಳ, ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ತೀವ್ರ ಹೃದಯಾಘಾತದಿಂದ ಶಿವಾನಂದ್ ಕೊನೆಯುಸಿರೆಳೆದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ