ವಿಧಾನಸಭೆ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ. ಹೆಬ್ಬಾಳ, ದೇವದುರ್ಗ ಮತ್ತು ಬೀದರ್ ಮೂರೂ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ. ಹೆಚ್.ಡಿ. ಕುಮಾರಸ್ವಾಮಿ ಭರವಸೆಗೆ ಮತದಾರ ಮಣೆ ಹಾಕಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಜೆಡಿಎಸ್ ಈ ಚುನಾವಣೆಯಲ್ಲಿ ಮತವಿಭಜನೆ ಮಾಡಿ ಕಾಂಗ್ರೆಸ್ಗೆ ನಷ್ಟ ಉಂಟುಮಾಡುತ್ತದೆಂಬ ಅಭಿಪ್ರಾಯ ಹೊಂದಲಾಗಿತ್ತು.