ಕುಣಿಗಲ್ ಶಾಸಕ ಡಾ.ರಂಗನಾಥ್ ವಿರುದ್ಧ ಕಿಡಿಕಾರಿದ ಜೆಡಿಎಸ್ ಯುವ ಮುಖಂಡ

ಶುಕ್ರವಾರ, 14 ಡಿಸೆಂಬರ್ 2018 (10:21 IST)
ಬೆಂಗಳೂರು : ಕೈ ಮುಖಂಡ, ಕುಣಿಗಲ್ ಶಾಸಕ ಡಾ.ರಂಗನಾಥ್ ವಿರುದ್ಧ ಜೆಡಿಎಸ್ ಯುವ ಮುಖಂಡ ಜಗದೀಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.


ಮಾಜಿ ಶಾಸಕ ಡಿ. ನಾಗರಾಜಯ್ಯ ಪುತ್ರ, ಜೆಡಿಎಸ್ ಯುವ ಮುಖಂಡ ಜಗದೀಶ್ ಅವರು ,’ರಂಗನಾಥ್ ಕುಣಿಗಲ್ ನಲ್ಲಿ ಜೆಡಿಎಸ್ ಪಕ್ಷ ಮುಗಿಸಲು ಹೊರಟಿದ್ದಾರೆ. ನೂರಾರು ಜನ ಅಮಾಯಕ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.


‘ಜೆಡಿಎಸ್ ಜೊತೆ ಹೊಂದಾಣಿಕೆ ಅವಶ್ಯಕತೆ ಇಲ್ಲ ಎಂದು ಶಾಸಕರು ಹೇಳಿದ್ದಾರೆ. ನಾವು ಜೆಡಿಎಸ್ ನವರು ಪ್ರಬಲವಾಗಿದ್ದೇವೆ. ನಮಗೂ ಕಾಂಗ್ರೆಸ್ ಅವಶ್ಯಕತೆ ಇಲ್ಲ. ಈಗಾಗಲೇ ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಅಲೆ ಎದ್ದಿದೆ. ಶಾಸಕ ರಂಗನಾಥ್ ವಿರುದ್ಧ ಜನ ಅಸಮಾಧಾನಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮುದ್ದಹನುಮೇಗೌಡರನ್ನೇ ಓವರ್ ಟೇಕ್ ಮಾಡಲಿದ್ದಾರೆ’ ಎಂದು  ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ