ಜೆಡಿಎಸ್‌ನಿಂದ ಕರ್ನಾಟಕ ವಿಕಾಸ ರಥಯಾತ್ರೆ: ಕುಮಾರಸ್ವಾಮಿ

ಶುಕ್ರವಾರ, 3 ನವೆಂಬರ್ 2017 (15:50 IST)
ಮುಂಬರುವ ನವೆಂಬರ್ 7 ರಿಂದ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತಿದ್ದು, ಜೆಡಿಎಸ್‌ನಿಂದ ಕರ್ನಾಟಕ ವಿಕಾಸ ರಥಯಾತ್ರೆ ಹೊರಡಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ರಥಯಾತ್ರೆಯ ವಾಹನಕ್ಕೆ ಕರ್ನಾಟಕ ವಿಕಾಸ ವಾಹಿನಿ ಎಂದು ಹೆಸರಿಡಲಾಗಿದೆ ಎಂದು ತಿಳಿಸಿದ್ದಾರೆ.
 
ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ನಂತರ ರಥಯಾತ್ರೆ ಚಿಕ್ಕಮಗಳೂರಿಗೆ ತೆರಳಲಿದ್ದು, ನಂತರ ತರಿಕೇರಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
 
ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ಕೂಡಾ ಹಲವು ಜಿಲ್ಲೆಗಳಲ್ಲಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಹಿರಿಯ ಮುಖಂಡರು ರಥಯಾತ್ರೆಗೆ ಸಾಥ್ ನೀಡಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ