ಉ.ಕ ನೆರೆ ಸಂತ್ರಸ್ತರಿಗೆ ಒಂದು ತಿಂಗಳ ಸಂಬಳ ನೀಡಲು ಮುಂದಾದ ಜೆಡಿಎಸ್ ಶಾಸಕರು

ಶುಕ್ರವಾರ, 9 ಆಗಸ್ಟ್ 2019 (14:30 IST)
ಬೆಂಗಳೂರು : ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ಒಂದು ತಿಂಗಳ ಸಂಬಳವನ್ನು ನೀಡಲು ಜೆಡಿಎಸ್ ಶಾಸಕರು ನಿರ್ಧಾರ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಎಲ್ಲಾ ಶಾಸಕರ ಒಂದು ತಿಂಗಳ ಸಂಬಳ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ. ಹಾಗೇ ಕಷ್ಟದ ಸಂದರ್ಭದಲ್ಲಿ ನಮ್ಮ ಅಣ್ಣ-ತಮ್ಮಂದಿರೊಂದಿಗೆ ನಿಲ್ಲೋಣ. ಬೆಳಗಾವಿ, ರಾಯಚೂರು, ಹಾಸನ, ಕೊಡಗು ಹಾಗೂ ಬಾಗಲಕೋಟೆ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ  ಎಂದು ತಿಳಿಸಿದ್ದಾರೆ.


ಅಲ್ಲದೇ  ಜ್ವರದಿಂದ ಬಳಲುತ್ತಿರುವ ಕಾರಣ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ಒಂದೆರಡು ದಿನಗಳಲ್ಲಿ ಉತ್ತರ ಕರ್ನಾಟಕಕ್ಕೆ ತೆರಳಿ ಜನರ ಕಷ್ಟಗಳಲ್ಲಿ ಭಾಗಿಯಾಗುತ್ತೇನೆ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ