ಜೆಡಿಎಸ್ ಬೃಹತ್ ಸಮಾವೇಶ; ಪಕ್ಷದ ಎಲ್ಲಾ ಮುಖಂಡರಿಗೂ ಆಹ್ವಾನ

ಗುರುವಾರ, 23 ಜನವರಿ 2020 (11:11 IST)
ಬೆಂಗಳೂರು : ಪಕ್ಷ ಬಲವರ್ಧನೆಯ ಹಿನ್ನಲೆ ಬೆಂಗಳೂರಿನಲ್ಲಿ ಇಂದು ಜೆಡಿಎಸ್ ಬೃಹತ್ ಸಮಾವೇಶ ಹಮ್ಮಿಕೊಂಡಿದೆ.

ಚುನಾವಣೆಯ ನಂತರ ಜೆಡಿಎಸ್ ನಲ್ಲಿ ನಾಯಕರ ನಡುವೆ ಅಸಮಾಧಾನ , ಗೊಂದಲಗಳು ಏರ್ಪಟ್ಟಿದ್ದು, ಇದೀಗ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳುವ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು  ಪಕ್ಷದ ಎಲ್ಲಾ ಮುಖಂಡರನ್ನು ಒಗ್ಗೂಡಿಸುವ ಪ್ಲ್ಯಾನ್ ಮಾಡಿದ್ದಾರೆ.

ಅದಕ್ಕಾಗಿ ಇಂದು ಜೆಡಿಎಸ್ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಇದಕ್ಕೆ ಜೆಡಿಎಸ್ ಹಾಲಿ, ಮಾಜಿ ಶಾಸಕರು, ಎಂಎಲ್ ಸಿಗಳು, ಪಕ್ಷದ ಎಲ್ಲಾ ಮುಖಂಡರಿಗೂ ಸಮಾವೇಶಕ್ಕೆ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ