ಸಮಾವೇಶದ ಬಗ್ಗೆ ಪ್ರತಿಕ್ರಿಯಿಸಿರುವ ದೇವೇಗೌಡ, ಪಕ್ಷದ ಬಲವರ್ಧನೆಗೆ ಈ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು, ಪಕ್ಷದ ಎಲ್ಲಾ ನಾಯಕರೂ ಕೂಡ ಭಾಗವಹಿಸಲಿದ್ದಾರೆ. ಅಲ್ಲದೆ ಸಮಾವೇಶದ ಬಳಿಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನೊಂದಣಿ ಮಾಡಿಕೊಳ್ಳುವ ಮೂಲಕ ಪಕ್ಷ ಸಂಘಟನೆ ಮಾಡಲಾಗುತ್ತದೆ. ಇನ್ನು ಸಮಾವೇಶದಲ್ಲಿ 10 ಅಂಶಗಳ ನಿಯಮಗಳ ಪ್ರಕರಟಿಸಲಿದ್ದು, ಅವುಗಳನ್ನು ಎಲ್ಲರೂ ಪಾಲಿಸಲೇಬೇಕು. ಇಲ್ಲವಾದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಸಮಾವೇಶದ ಬಳಿಕ ಜಿಲ್ಲೆಯ ಎಲ್ಲಾ 30 ಜಿಲ್ಲೆಗಳಲ್ಲಿಯೂ ಸದಸ್ಯರ ನೊಂದಣಿ ಕಾರ್ಯವನ್ನು ಆಯೋಜಿಸಿ ಪಕ್ಷ ಸಂಘಟನೆಗೆ ಶ್ರಮಿಸಲಾಗುವುದು ಎಂದರು.
ಈ ಹಿಂದೆ ಪಕ್ಷದ ವರಿಷ್ಠರೊಂದಿಗೆ ವಿಮುಖರಾಗಿ ವರಿತಿಸುತ್ತಿದ್ದ ಇಕ್ಬಾಲ್ ಅನ್ಸಾರಿ, ಮಾಗಡಿ ಬಾಲಕೃಷ್ಣ, ಹಾಗೂ ಚೆಲುವರಾಯಸ್ವಾಮಿ ಸೇರಿದಂತೆ ಇತರರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.