ಮಂಡ್ಯದಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ: ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ

ಗುರುವಾರ, 30 ಜೂನ್ 2016 (14:06 IST)
ಜೆಡಿಎಸ್ ರೆಬೆಲ್ ಶಾಸಕರಿಗೆ ಸೆಡ್ಡು ಹೊಡೆಯಲು ನಗರದಲ್ಲಿ ಶಕ್ತಿ ಪ್ರದರ್ಶನ ಏರ್ಪಡಿಸಿದ್ದು, ನೂತನವಾಗಿ ಆಯ್ಕೆಯಾದ ಶಾಸಕರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
 
ಮಂಡ್ಯ ನಗರದ ಸಿಲ್ವರ್ ಜುಬಿಲಿ ಪಾರ್ಕ್‌ನಲ್ಲಿ ಸಮಾವೇಶ ಆಯೋಜಿಸಲಾಗಿದೆ. ಶಕ್ತಿ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿದ ಜೆಡಿಎಸ್ ವರಿಷ್ಛ ಎಚ್.ಡಿ.ದೇವೇಗೌಡ, ನೂತನವಾಗಿ ಆಯ್ಕೆಯಾದ ಶಾಸಕರು ಜನಪರ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
 
ಜೆಡಿಎಸ್ ರೆಬೆಲ್ ಶಾಸಕರಿಗೆ ತಕ್ಕ ಪಾಠ ಕಲಿಸುವ ನಿಟ್ಟಿನಲ್ಲಿ ದೇವೇಗೌಡರು ಜೆಡಿಎಸ್ ಪಕ್ಷದ ಶಕ್ತಿಯನ್ನು ಪ್ರದರ್ಶಿಸಲು ಮಂಡ್ಯದಲ್ಲಿ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಎಚ್.ಡಿ.ರೇವಣ್ಣ, ಸಂಸದ ಪುಟ್ಟರಾಜು, ಶಾಸಕ ಜಿ.ಟಿ ದೇವೇಗೌಡ. ಸಾ.ರಾ ಮಹೇಶ್, ಡಿ.ಸಿ ತಮ್ಮಣ್ಣ ಸೇರಿದಂತೆ ಹಲವಾರು ಜೆಡಿಎಸ್ ಮುಖಂಡರು ಸಮಾರಂಭದಲ್ಲಿ ಉಪಸ್ಥಿತರಿದ್ದರು, ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಸೇರಿರುವುದು ದೇವೇಗೌಡರಿಗೆ ಸಂತಸ ತಂದಿತ್ತು ಎನ್ನಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ