ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಕೊಲೆ ಬೆದರಿಕೆ ಪೋಸ್ಟ್

ಮಂಗಳವಾರ, 11 ಜೂನ್ 2019 (15:05 IST)
ಮೈತ್ರಿ ಸರಕಾರದ ವಿರುದ್ಧ ಆಗಾಗ್ಗೆ ಬಾಂಬ್ ಸಿಡಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಕೊಲೆ ಮಾಡೋದಾಗಿ ಜೆಡಿಎಸ್ ಕಾರ್ಯಕರ್ತನೊಬ್ಬ ಪೋಸ್ಟ್ ಹರಿಬಿಟ್ಟಿದ್ದಾನೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ರನ್ನು ಕೊಲೆ ಮಾಡೋದಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹರಿಬಿಡಲಾಗಿದೆ. ಜೆಡಿಎಸ್ ಕಾರ್ಯಕರ್ತ ಅರುಣ್ ಕುಮಾರ್ ಎಂಬಾತನಿಂದ ಪೋಸ್ಟ್ ಹಾಕಲಾಗಿದೆ.

ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ವಿಶ್ವನಾಥ್, ಕುಡಿದು ಆ ರೀತಿ ಎಲ್ಲಾ ಪೋಸ್ಟ್ ಮಾಡಿರ್ತಾರೆ. ಅದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿಲ್ಲ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

ಇನ್ನು ಕಾಂಗ್ರೆಸ್ ಶಾಸಕ ಹೆಚ್. ಕೆ. ಪಾಟೀಲ್ ಪರ ನಿಂತಿರುವ ಜೆಡಿಎಸ್‌ ಶಾಸಕ ವಿಶ್ವನಾಥ್, ಜಿಂದಾಲ್‌ ಗೆ ಕೊಟ್ಟ ಭೂಮಿಯನ್ನು ವಾಪಸ್ಸು ಪಡೆಯುವಂತೆ ಆಗ್ರಹ ಮಾಡಿದ್ದಾರೆ. ವಿಧಾನಸೌಧದಲ್ಲಿ ಜೆಡಿಎಸ್‌ ಶಾಸಕ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ