ಕುಲಪತಿಗಳು ಡಕಾಯಿತರಿಗಿಂತ ಕಡೆ: ರಾಯರೆಡ್ಡಿ ಹೇಳಿಕೆಗೆ ಜೆಡಿಎಸ್ ಕಿಡಿ

ಶನಿವಾರ, 20 ಆಗಸ್ಟ್ 2016 (12:33 IST)
ಕುಲಪತಿಗಳು ಡಕಾಯಿತರಿಗಿಂತ ಕಡೆ ಎಂಬ ಹೇಳಿಕೆಗೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಜೆಡಿಎಸ್ ಶಾಸಕರು ಒತ್ತಾಯಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಶಾಸಕರು, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಕುಲಪತಿಗಳನ್ನು ಡಕಾಯಿತರಿಗೆ ಹೋಲಿಸಿರುವುದು ಸರಿಯಲ್ಲ. ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
 
ಪ್ರೋ. ಕೆ.ಎಸ್.ರಂಗಪ್ಪ ಅವರ ಪರ ಬ್ಯಾಟಿಂಗ್ ಮಾಡಿದ ಜೆಡಿಎಸ್ ಶಾಸಕರು, ರಂಗಪ್ಪ ಅವರ ಅಧಿಕಾರಾವಧಿಯಲ್ಲಿ ವಿವಿಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಉನ್ನತ ಶಿಕ್ಷಣ ಸಚಿವರ ಹೇಳಿಕೆ ಅತ್ಯಂತ ಬಾಲಿಶ. ಸಚಿವರ ಆರೋಪಗಳು ನಿರಾಧಾರ ಎಂದು ಕಿಡಿಕಾರಿದರು.
 
ಜೆಡಿಎಸ್ ಪಕ್ಷದ ಸುದ್ದಿಗೋಷ್ಠಿಯಲ್ಲಿ ಎಂಎಲ್‌ಸಿ ಸಂದೇಶ್ ನಾಗರಾಜ್, ಕೆ.ಟಿ. ಶ್ರೀಕಂಠೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ