ಈ ಬಾರಿ ಕರ್ನಾಟಕದಲ್ಲಿ ಜೆಡಿಎಸ್ ಸ್ವತಂತ್ರ ಸರ್ಕಾರ ಗ್ಯಾರಂಟಿ!

ಭಾನುವಾರ, 15 ಏಪ್ರಿಲ್ 2018 (11:36 IST)
ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆದ್ದು ಸ್ವತಂತ್ರವಾಗಿ ಸರ್ಕಾರ ರಚನೆ ಮಾಡುತ್ತದೆ ಎಂದು ಜೆಡಿಎಸ್ ನಾಯಕ ಟಿ ಎ ಶರವಣ ಹೇಳಿಕೊಂಡಿದ್ದಾರೆ.

ಕರ್ನಾಟಕವನ್ನು ಬಿಜೆಪಿ ಮತ್ತು ಕಾಂಗ್ರೆಸ್ ಮುಕ್ತ ಮಾಡುತ್ತೇವೆ. ಎರಡೂ ಪಕ್ಷಗಳಿಂದ ಕರ್ನಾಟಕಕ್ಕೆ ಯಾವುದೇ ಲಾಭವಾಗಿಲ್ಲ. ಕಾಂಗ್ರೆಸ್ ಇಡೀ ರಾಜ್ಯವನ್ನೇ ಲೂಟಿ ಮಾಡಿದೆ ಎಂದು ಶರವಣ ಹೇಳಿದ್ದಾರೆ.

ಈ ಬಾರಿ ಈ ಎರಡೂ ಪಕ್ಷಗಳನ್ನು ಸೋಲಿಸಿ ಜೆಡಿಎಸ್ ಸ್ವಂತ ಶಕ್ತಿಯಿಂದಲೇ ಸರ್ಕಾರ ರಚಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ನ ವಿಕಾಸ ಪರ್ವ ಯಾತ್ರೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ