ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ನಿಂದ ಅಮಾನತ್ತುಗೊಂಡ ಶಾಸಕ ಚಲುವರಾಯ ಸ್ವಾಮಿ ಸೇರಿದಂತೆ ಇತರ ಏಳು ಮಂದಿ ಶಾಸಕರು ಜೆಡಿಎಸ್ ಅಭ್ಯರ್ಥಿಗೆ ಮತಹಾಕದಂತೆ ಕರೆ ನೀಡಿದ್ದರು. ಆದರೆ, ಅವರ ಕರೆಗೆ ಮೂರು ಕಾಸಿನ ಬೆಲೆ ನೀಡದ ಮತದಾರರು ಜೆಡಿಎಸ್ ಅಭ್ಯರ್ಥಿ ಶ್ರೀಕಂಠೇಗೌಡರನ್ನು ಗೆಲ್ಲಿಸಿದ್ದಾರೆ ಎಂದು ಬಂಡಾಯ ಶಾಸಕರ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ವ್ಯಂಗ್ಯವಾಡಿದರು.