‘JNU ದಾಳಿ ಹಿಂದೆ ಮೋದಿ, ಅಮಿತ್ ಷಾ ಕೈವಾಡ’

ಮಂಗಳವಾರ, 7 ಜನವರಿ 2020 (18:10 IST)
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ರ ಕೈವಾಡದಿಂದಾಗಿಯೇ ಜೆಎನ್ ಯುನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ.

ಹೀಗಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ದೂರಿದ್ದಾರೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಮಾರಣಾಂತಿಕವಾಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ.

ವಿದ್ಯಾರ್ಥಿನಿಯರ ಮೇಲೂ ಗಂಭೀರ ಪ್ರಮಾಣದ ಹಲ್ಲೆ ನಡೆದಿದೆ. ಮೋದಿ, ಷಾ ಆಡಳಿತದಲ್ಲಿ ದೇಶ ಎತ್ತ ಸಾಗುತ್ತಿದೆ ಅಂತ ಪ್ರಶ್ನೆ ಮಾಡಿದ್ದಾರೆ.

ಹಲ್ಲೆ ಮಾಡಿದವರನ್ನು ಬಿಟ್ಟು, ಪ್ರತಿಭಟನೆ ಮಾಡೋರನ್ನೇ ಪೊಲೀಸರು ಕಿರುಕುಳ ನೀಡೋಕೆ ಟಾರ್ಗೆಟ್ ಮಾಡಿಕೊಂಡಿದ್ದಾರೆ ಅಂತ ಟೀಕೆ ಮಾಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ