ರಾಹುಲ್ ಗಾಂಧಿ ಭೇಟಿಯಿಂದ ಬಿಜೆಪಿಗೆ ಬಲ– ಜೋಶಿ

ಭಾನುವಾರ, 18 ಫೆಬ್ರವರಿ 2018 (18:03 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಂದ ಕಡೆಯಲ್ಲ ವಿರೋಧ ಪಕ್ಷದವರು ಗೆಲ್ಲುತ್ತಾರೆ. ಆದ್ದರಿಂದ ಅವರು ಬಂದು ಹೋದಷ್ಟು ನಮಗೇ ಅನುಕೂಲ ಎಂದು ಬಿಜೆಪಿ ಸಂಸದ ಪ್ರಹ್ಲಾದ ಜೋಶಿ ಹೇಳಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಾಹುಲ್ ಗಾಂಧಿ ಅವರ ಹವಾ ಇಲ್ಲ. ಕಾಂಗ್ರೆಸ್‌ನವರು ಸುಳ್ಳು ಹೇಳುತ್ತಾರೆ. ಅವರು ರಾಜ್ಯಕ್ಕೆ ಭೇಟಿ ನೀಡಿರುವುದರಿಂದ ರಾಜ್ಯದಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ತಿಳಿಸಿದ್ದಾರೆ.
 
ಶಾಸಕ ಹ್ಯಾರಿಸ್ ಪುತ್ರನ ವಿರುದ್ಧ ಕೇಳಿಬಂದಿರುವ ಹಲ್ಲೆ ಪ್ರಕರಣಕ್ಕೆ ಪ್ರತಿಕ್ರಿಯಿಸಿ ಕಾಂಗ್ರೆಸ್‍ನವರಿಗೆ ಇದು ಹೊಸತೇನಲ್ಲ. ಅನೇಕ ಕಾಂಗ್ರೆಸ್ಸಿಗರು ಗೂಂಡಾಗಿರಿ ಮಾಡಿದ್ದಾರೆ. ಹ್ಯಾರಿಸ್ ಪುತ್ರನನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ